ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಜೂ. 08. ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತಾವರೆಕೆರೆಯಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಕೃಷ್ಣೇಗೌಡ ಹಾಗೂ ರಾಧಾ ದಂಪತಿಯ ಪುತ್ರಿ ಎಂಇಎಸ್ ಶಾಲೆಯ ವಿದ್ಯಾರ್ಥಿ ಲಿಸ್ಮಿತಾ ಎಂದು ಗುರುತಿಸಲಾಗಿದೆ. ಈಕೆ ಶಾಲೆಯಿಂದ ಮನೆಗೆ ವಾಪಸ್ ಆಗಿ ಬಸ್‌ನಿಂದ ಇಳಿಯುತ್ತಿದ್ದ ವೇಳೆ ಬಸ್ ಬಾಲಕಿ ಮೇಲೆ ಹರಿದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಲಿಸ್ಮಿತಾಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದು, ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Also Read  ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ

 

 

 

 

 

error: Content is protected !!
Scroll to Top