ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ, ಪ್ರಸ್ತುತ ಚಿತ್ರದುರ್ಗದಲ್ಲಿ ಪೊಲೀಸ್ ನಿರೀಕ್ಷಕರಾಗಿರುವ ಲಿಂಗರಾಜು ಎಂಬವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ಅವರು ಇತ್ತೀಚೆಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಆದರೆ ಅಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

error: Content is protected !!
Scroll to Top