ಪುತ್ತೂರು: ಮರದ ಕೊಂಬೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 09. ಮರದ ಗೆಲ್ಲು ಕಡಿಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮರದ ಗೆಲ್ಲೊಂದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ಎಂಬಲ್ಲಿ ನಡೆದಿದೆ.

ಮೃತರನ್ನು ದರ್ಬೆತ್ತಡ್ಕ ನಿವಾಸಿ ಗುರುಪ್ರಸಾದ್(49) ಎಂದು ಗುರುತಿಸಲಾಗಿದೆ. ಜೂ. 08ರಂದು ಸಂಜೆ ಗುರುಪ್ರಸಾದ್ ರವರು ತಮ್ಮ ಜಮೀನಿನಲ್ಲಿ ಮರದ ಗೆಲ್ಲನ್ನು ಕಡಿಸುತ್ತಿದ್ದ ವೇಳೆ ಇವರು ಹಗ್ಗದಿಂದ ಮರದ ಗೆಲ್ಲನ್ನು ಕೆಳಗೆ ನಿಂತು ಎಳೆಯುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಗೆಲ್ಲು ಇವರ ಮೈ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಇವರನ್ನು ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೂಯ್ಯಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದೆನ್ನಲಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು

error: Content is protected !!
Scroll to Top