ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಅನುಮಾನಾಸ್ಪದವಾಗಿ ಮೃತಪಟ್ಟ ಇರಾ ಗ್ರಾಮದ ಕುಕ್ಕಾಜೆ ನಿವಾಸಿ ಸವಾದ್ ರವರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ನೀಡಿದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ಯು.ಟಿ.ಖಾದರ್ ಅವರು, ಪ್ರಕರಣದ ಕುರಿತು ಸೂಕ್ತವಾಗಿ ತನಿಖೆ ನಡೆಸಿ, ಆರೋಪಿಗಳ ವಿರಿದ್ದ ಕಠಿಣ ಕ್ರಮ ಜರುಗಿಸಬೇಕೆಂದು ಪೊಲೀಸರಿಗೆ ಸೂಚಿಸುವುದಾಗಿ ಹೇಳಿದರು. ಅಲ್ಲದೇ ಸವಾದ ಸಾವಿನ ಹಿಂದೆ ಗಾಂಜಾ ವ್ಯವಹಾರದ ಶಂಕೆಯಿರುವುದರಿಂದ ಮಾದಕ ದ್ರವ್ಯ ಜಾಲದ ಬಗ್ಗೆ ನಿಗಾ ಇಡಲು ವಿಶೇಷ ತನಿಖಾ ತಂಡವನ್ನು ರಚಿಸಿ, ಮತ್ತು ಈ ಕುರಿತಂತೆ ವರದಿ ಸಲ್ಲಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

error: Content is protected !!

Join the Group

Join WhatsApp Group