ಗೀಸರ್ ನಿಂದ ವಿಷಾನಿಲ ಸೋರಿಕೆ ➤ ಯುವಕ – ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ 12.  ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ.

ಮೃತರನ್ನು ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್ ನ ಸುಧಾರಾಣಿ ಎಂದು ಗುರುತಿಸಲಾಗಿದೆ.ಇವರಿಬ್ಬರು ಬೆಂಗಳೂರಿನ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್​ನಲ್ಲಿ ಉದ್ಯೋಗದಲ್ಲಿದ್ದರು. ಬೆಂಗಳೂರಿನ ತಬೇರನಹಳ್ಳಿಯಲ್ಲಿ ಜೂನ್ 10 ರಂದು ಈ ಘಟನೆ ನಡೆದಿದ್ದು,ಘಟನೆ ಎರಡು ದಿನ ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳಿಂದ ಮನೆಯಿಂದ ಯಾರೂ ಹೊರಗೆ ಬಾರದಿದ್ದಾಗ ಮನೆಯ ಮಾಲೀಕರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆ ಬಾಗಿಲು ಒಡೆದು ನೋಡಿದಾಗ ಇಬ್ಬರ ಮೃತದೇಹ ಸ್ನಾನದ ಕೋಣೆಯಲ್ಲಿ ಪತ್ತೆಯಾಗಿದೆ.

 

 

error: Content is protected !!

Join the Group

Join WhatsApp Group