ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 12. ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲಿನ ಹಾಸ್ಟೆಲ್ ನಲ್ಲಿ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ ಹಾಗೂ ಪುಷ್ಪ ದಂಪತಿಗಳ ಪುತ್ರಿ ರೇಖಾ(15) ಗುರುತಿಸಲಾಗಿದೆ. ಈಕೆಯ ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನ ಹೊಂದಿದ್ದು. ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ ಪಡಿಲ್ ಹಾಸ್ಟೆಲ್‌ಗೆ ಸೇರಿಸಲಾಗಿತ್ತು. ಆರಂಭದಲ್ಲಿ ಹಾಸ್ಟೆಲಿಗೆ ಹೋಗಲು ನಿರಾಕರಿಸಿದ ಆಕೆ ಬಳಿಕ ಹಾಸ್ಟೆಲ್ ಸೇರಲು ಒಪ್ಪಿದ್ದಳು. ಹಾಸ್ಟೆಲ್ ಬೇಡ, ಇಂಗ್ಲೀಷ್ ಕಷ್ಟದ ವಿಷಯ ಎಂದು ಆಗಾಗ ಹೇಳುತ್ತಿದ್ದಳು ಎನ್ನಲಾಗಿದೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ➤ ಈಜು ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶುಭಹಾರೈಕೆ.

 

error: Content is protected !!
Scroll to Top