ಬೆಂಗಳೂರಿನಲ್ಲಿ 250 ಕ್ಯಾಂಟೀನ್ ಗಳ ಆರಂಭ ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಹಳೇ ಇಂದಿರಾ ಕ್ಯಾಂಟೀನ್ ಗೆ ಹೊಸ ರೂಪ ನೀಡಿ ಮತ್ತೆ ಇಂದಿರಾ ಕ್ಯಾಂಟಿನ್ ಆರಂಭಿಸಲು ತೀರ್ಮಾನ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸೋಮವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವಾರ್ಡ್ ಗಳಲ್ಲೂ ಕ್ಯಾಂಟಿನ್ ಆರಂಭಿಸುತ್ತೇವೆ. ಬೆಂಗಳೂರಿನಲ್ಲಿ 250 ಕ್ಯಾಂಟಿನ್ ಪ್ರಾರಂಭಕ್ಕೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟಿನ್ ಗಳಲ್ಲಿನ ಮೆನು ಬದಲಾವಣೆ ಮಾಡುವ ಮೂಲಕ ಹೊಸದಾಗಿ ಟೆಂಡರ್ ಕರೆಯಲು ಸರಕಾರ ತೀರ್ಮಾನಿಸಿದೆ ಎಂದರು. ಈವರೆಗೆ ಕ್ಯಾಂಟೀನ್ ಗಳಿಗೆ ಪಾಲಿಕೆ ಶೇ.70 ಹಾಗೂ ಸರಕಾರ ಶೇ.30ರಷ್ಟು ಅನುದಾನ ನೀಡುತ್ತಿತ್ತು. ಇನ್ಮುಂದೆ ಸರಕಾರ ಪಾಲಿಕೆ ತಲಾ 50ರಷ್ಟು ಅನುದಾನ ನೀಡುತ್ತೆ ಎಂದರು.

Also Read  ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

error: Content is protected !!
Scroll to Top