ಗಾಂಜಾ ಪ್ರಕರಣ- 4 ಮಂದಿ ಸೆರೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 13. ಇಲ್ಲಿನ ಮುಕ್ಕ ಡಿಕ್ಸಿ ವೇಬ್ರಿಡ್ಜ್ ಬಳಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಟಿಪಳ್ಳ ನಿವಾಶಿ ಪ್ರೀತಂ, ಸುಕುಮಾರ, ನಿತ್ಯಾನಂದ ಹಾಗೂ ಸುರತ್ಕಲ್ ತಡಂಬೈಲು ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ಸಂದರ್ಭ ರೌಂಡ್ಸ್ ನಲ್ಲಿದ್ದ ಸುರತ್ಕಲ್ ಠಾಣಾ ಎಸ್.ಐ ಪ್ರದೀಪ್ ಟಿ.ಆರ್ ರವರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆರೋಪಿಗಳು ಸಮರ್ಪಕ ಉತ್ತರ ನೀಡದೆ ಇದ್ದುದರಿಂದ, ನಾಲ್ವರನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ತಿಳಿದುಬಂದಿದೆ. ಈ ಹಿನ್ನಲೆ ನಾಲ್ವರ ವಿರುದ್ದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Also Read  ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

error: Content is protected !!
Scroll to Top