ಮಂಗಳೂರು: ಇಂದು ಲೋಕಾಯುಕ್ತ ಅಧೀಕ್ಷಕರಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರ ಇಂದು (0ಜೂ.14) ಬೆಳಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಸಾರ್ವಜನಿಕರು ಈ ಸಂದರ್ಭದಲ್ಲಿ ದೂರು ನೀಡಬಹುದಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಕೂಡ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ಸಲ್ಲಿಸಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಅರ್ಜಿಗಳನ್ನು ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು.


ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:
ಪೊಲೀಸ್ ಅಧೀಕ್ಷಕರ ಕಚೇರಿ-0824 – 2950997, 9364062571, ಪೊಲೀಸ್ ಉಪಾಧೀಕ್ಷಕರು-1 ಕಚೇರಿ-0824–2453420, 9364062579, ಪೊಲೀಸ್ ಉಪಾಧೀಕ್ಷಕರು-2 ಕಚೇರಿ-0824–2453420, 9364062580, ಪೊಲೀಸ್ ನಿರೀಕ್ಷಕರು-1 ಕಚೇರಿ 0824–2427237, 9364062691, ಪೊಲೀಸ್ ನಿರೀಕ್ಷಕರು-2 ಕಚೇರಿ 0824–2427237, 9364062692. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ.ಎ. ಸೈಮನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group