ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 14. ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಇಚಿಲಂಪಾಡಿಯ ಯುವಕ ಮೃತಪಟ್ಟ ಘಟನೆ ಮಂಗಳೂರಿನ ಪಂಪ್ ವೆಲ್ ನಲ್ಲಿ ಬುಧವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ.

ಮೃತ ಸವಾರನನ್ನು ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25) ಎಂದು ಗುರುತಿಸಲಾಗಿದೆ. ಈತ ಬೆಂದೂರ್ ವೆಲ್ ನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ರೂಮ್ ಗೆ ತೆರಳುತ್ತಿದ್ದ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ಸಂಭವಿಸಿದೆ.

Also Read  ಕಡಬ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ ➤ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್

error: Content is protected !!
Scroll to Top