ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 14. ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹೆಬ್ರಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಘಟನೆ ವರದಿಯಾಗಿದೆ.

ಆರೋಪಿಯನ್ನು ಚಿಕ್ಕಮಗಳೂರು ಆಲ್ದೂರು ಹಾಂದಿ ಇಂದಿರಾ ನಗರದ ಸಂತೋಷ (38) ಎಂದು ಗುರುತಿಸಲಾಗಿದೆ. ಈತನ ವಿರುದ್ದ  2010 ರಲ್ಲಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿತ್ತು. ಆದರೆ, ಪ್ರಕರಣದ ವಿಚಾರಣಾ ಸಂದರ್ಭ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಆದರೆ, ಈತ  ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಗ್ರಾಮದ ಹಾಂದಿಯ ಕಾಫಿ ತೋಟದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆಂಬ ಮಾಹಿತಿ ಕಲೆ ಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

error: Content is protected !!

Join the Group

Join WhatsApp Group