ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಕೋಟ, ಜೂ. 15. ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66ರ ಸಾಸ್ತಾನದ ಮಧುರಾ ಹೋಟಲ್ ಸಮೀಪ ನಡೆದಿದೆ.

ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಇವರು ಸಾಸ್ತಾನ ಕೋಡಿ ರಸ್ತೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಹೋಟೆಲ್ ನಿಂದ ಊಟ ಪಾರ್ಸೆಲ್ ಪಡೆದು ರಸ್ತೆಬದಿ ನಡೆದುಕೊಂಡು ಬರುತ್ತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಜೀಪು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಮೇಶ್ ರನ್ನು ಆಸ್ಪತ್ರೆಗೆ ದಾಖಲಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ

error: Content is protected !!
Scroll to Top