ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ . 16 . ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಅಬ್ದುಲ್ ಹಮೀದ್ ಎಂದು ಗುರುತಿಸಲಾಗಿದೆ . ಮದ್ರಸ ಶಿಕ್ಷಕರಾಗಿದ್ದ ಇವರು  ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು.ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Also Read  ಪಾಲಿಕೆ ಹೊಸ ಮಾರ್ಗಸೂಚಿಗೆ ಪಿಜಿ ಮಾಲೀಕರ ವಿರೋಧ ಮರು ಪರಿಶೀಲಿಸುವಂತೆ ಮನವಿ  

 

error: Content is protected !!
Scroll to Top