ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ ➤  ಇಂದು ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ . 16 . ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಮಂಡನೆ ಜುಲೈ 7 ರಂದು ನಡೆಯಲಿದ್ದು, ಈ ಕುರಿತಾದ ಪೂರ್ವಭಾವಿ ಸಭೆ ಇಂದು ಕೂಡ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ.ಇಂದು ಬೆಳಗ್ಗೆ 11 ರಿಂದ ಸಂಜೆಯತನಕ ಬಜೆಟ್ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಲಿದ್ದು, 14 ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ.

error: Content is protected !!
Scroll to Top