ಪುತ್ತೂರು: ಅಖಿಲ ಭಾರತ ಶಾಸಕಾಂಗ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಮುಂಬಯಿಯ ಜಿಯೋ ಕನ್ವೆನ್ಶನ್ ಸೆಂಟರ್ ನಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಭಾಗವಹಿಸಿದರು.


ಈ ಸಮ್ಮೇಳನದಲ್ಲಿ ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ದೇಶದ ವಿವಿಧೆಡೆಯಿಂದ ಸುಮಾರು‌ 2000 ಮಂದಿ ಸೇರಿದಂತೆ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮಾವೇಶಕ್ಕೆ ಜೂನ್‌ 17ರ ಶನಿವಾರ ತೆರೆ ಬೀಳಲಿದೆ.

error: Content is protected !!

Join the Group

Join WhatsApp Group