ಚೂರಿ ಇರಿದ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಕೋರ್ಟ್ ಗೆ ಹಾಜರ್

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 19 . ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು, ಇದೀಗ ಆರೋಪಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿರುವ  ಮೂಲಕ ಬಿಡುಗಡೆಯಾಗಿದ್ದಾನೆ.

ಕಾನ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದು ಪರಾರಿಯಾಗಿದ್ದ.ಇದೀಗ ಆರೋಪಿಗೆ ಮಂಗಳೂರಿನ ಎರಡನೇ J M F C ಆರೋಪಿಗೆ ಷರತ್ತು ಬದ್ಧ ಜಾಮೀನನ್ನು ಜೂ.17ರಂದು ನೀಡಿದೆ. ಆರೋಪಿ ಪರ ವಕೀಲರಾದ ಜೀಶಾನ್ ಅಲಿ ಸುರತ್ಕಲ್ ವಾದಿಸಿದ್ದು ತಾಜುದ್ದೀನ್ ಸಹಕರಿಸಿದ್ದರು ಎನ್ನಲಾಗಿದೆ.

 

 

 

Scroll to Top