ಮಂಗಳೂರು: ನಾಳೆ (ಜೂ. 21) ರೆಡ್ ಕ್ರಾಸ್ ವತಿಯಿಂದ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಯೋಗ ಗುರು ಜಗದೀಶ್ ಶೆಟ್ಟಿ ಬಿಜೈ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆಯು ನಗರದ ಕೋಡಿಕಲ್ ಎಸ್‍ಎನ್‍ಡಿಪಿ ಮಂದಿರದಲ್ಲಿ ಜೂ.21ರಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಮಂಗಳೂರು ಮೇಯರ್ ಜಯಾನಂದ ಅಂಚನ್ ಕಾರ್ಯಕ್ರಮ ಉದ್ಘಾಟಿಸುವರು. ರೆಡ್‍ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಟ, ನಿರ್ದೇಶಕ ಡಾ. ದೇವದಾಸ್ ಕಾಪಿಕಾಡ್, ಕೋಡಿಕಲ್ ಎಸ್‍ಎನ್‍ಡಿಪಿ ಮಂದಿರದ ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Scroll to Top