ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು

 (ನ್ಯೂಸ್ ಕಡಬ) newskadaba.com ಜೈಪುರ, ಜೂ. 21. ಹ್ಯಾಂಡ್‌ ಪಂಪ್‌ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ಪೈಪ್ ತಗುಲಿದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಜಸ್ಥಾನದ ಧೋಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಲೋಕೇಶ್ ಮತ್ತು ಧ್ರುವ ಎಂದು ಗುರುತಿಸಲಾಗಿದೆ. ರಾಮ್‌ ವೀರ್, ಥಾನ್ ಸಿಂಗ್, ಹರಿ ಸಿಂಗ್ ಹಾಗೂ ಶಿಮ್ಲಾ ತೀವ್ರ ಸುಟ್ಟಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸೇಡಿ ಉಪವಿಭಾಗದ ವಿಜಯಕಾಪುರ ಗ್ರಾಮದಲ್ಲಿ ಹ್ಯಾಂಡ್ ಪಂಪ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಕಾರ್ಮಿಕರು ಎಳೆದ ಪೈಪ್ ಮೇಲಿನಿಂದ ಹಾದು ಹೋಗಿದ್ದ ಹೈಟೆನ್ಷನ್ ಲೈನ್‌ಗೆ ತಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Also Read  ಭಾರತದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ

 

error: Content is protected !!
Scroll to Top