ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21.ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಪಾಲ್ದಾನೆ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಎಂದು ಗುರುತಿಸಲಾಗಿದೆ. ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರದಂದು ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಇದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ

 

error: Content is protected !!
Scroll to Top