ಹಾವು ಕಚ್ಚಿ ರೈತ ಮೃತ್ಯು

(ನ್ಯೂಸ್ ಕಡಬ) newskadaba.com ತಿಪಟೂರು, ಜೂ. 21. ಹುಲ್ಲು ತೆಗೆಯುವ ವೇಳೆ ಹಾವು ಕಚ್ಚಿ ರೈತನೋರ್ವ ಮೃತಪಟ್ಟ ಘಟನೆ ತಾಲೂಕಿನ ಹೊನ್ನವಳ್ಳಿ ಹೋಬಳಿ ಘಟಕಿನಕೆರೆ ಗ್ರಾಮದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಇವರು ಹಸುಗಳಿಗೆಂದು ಹುಲ್ಲನ್ನು ಕೀಳುತ್ತಿದ್ದ ವೇಳೆ, ಎಡಗಾಲಿಗೆ ಹಾವು ಕಚ್ಚಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹೊನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group