ನೆಲ್ಯಾಡಿ: ಖಾಸಗಿ ಬಸ್ ಡಿವೈಡರ್ ಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಹೆದ್ದಾರಿ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ರಾ.ಹೆ.75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಎಂಬಲ್ಲಿ ನಡೆದಿದೆ‌.


ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್‌ ನ ಮುಂಭಾಗ ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ ➤ 1ರಿಂದ 9 ವರೆಗಿನ ಕೋಣೆಗಳನ್ನು ಬಾಡಿಗೆಗೆ ಪಡೆಯಲು ಅರ್ಜಿ ಆಹ್ವಾನ

error: Content is protected !!
Scroll to Top