ನಾಳೆಯಿಂದ ಹಣ್ಣುಗಳ ಉತ್ಸವ-ಹಲಸು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಇದೇ ಜೂ.24 ಹಾಗೂ 25ರಂದು ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ವನ್ನು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಉಮನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಡಿ. ವಿರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ್ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇಗೌಡ, ಪ್ರತಾಪಸಿಂಹ ನಾಯಕ್.ಕೆ, ಮಂಜುನಾಥ ಭಂಡಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡುಶೆಡ್ಡೆ ಗ್ರಾಮ ಪಂಚಾಯತ್‍ನ ಅಧ್ಯಕ್ಷೆಯಾದ ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top