ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ವ್ಯಕ್ತಿಯೊಬ್ಬರು ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯಪದವು ಕಜೆಮೂಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.


ಮೃತರನ್ನು ನೆಟ್ಟಣಿಗೆ ಗ್ರಾಮದ ಆದೂರು ಬೀರಮೂಲೆ ನಿವಾಸಿ ನಾರಾಯಣ ನಾಯ್ಕ(75) ಎಂದು ಗುರುತಿಸಲಾಗಿದೆ ಇವರು ಸುಳ್ಯಪದವು ಕಜೆಮೂಲೆ ವೆಂಕಟೇಶ್ವರ ಭಟ್ ಎಂಬವರ ತೋಟದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮನೆಯಿಂದ ಹೋದ ಅವರು ನಾಪತ್ತೆಯಾಗಿದ್ದ ಕುರಿತು ಅವರ ಮನೆ ಮಂದಿ ದೂರು ನೀಡಿದ್ದರು. ಜೂ. 22ರಂದು ವೆಂಕಟೇಶ್ವರ ಭಟ್ ಅವರ ತೊಟದ ಕೆಲಸದಾಳು ಕೆರೆಯ ಸಮೀಪ ಹೋದಾಗ ಅಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಪರಿಶೀಲಿಸಿದಾಗ ನಾರಾಯಣ ನಾಯ್ಕ ಅವರ ಮೃತದೇಹ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ

error: Content is protected !!
Scroll to Top