ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದ ವೇಳೆ ಮೃತದೇಹ ಪತ್ತೆಯಾಗಿದೆ. ಶೌರ್ಯ ತಂಡದ ಮುರಳಿ, ಸೋಮಪ್ಪ, ಆನಂದ, ಅಪರ್ಣಾ, ಹಾಗೂ ಆಪತ್ಬಾಂಧವ ತಂಡದ ಸದಸ್ಯರಾದ ರಫೀಕ್, ನಾಸಿರ್, ಹಮೀದ್, ಅಬ್ಬಾಸ್, ಅಶ್ರಫ್, ಸ್ಥಳೀಯರಾದ ಮನೋಜ್, ಅನಿಲ್ ಮೃತದೇಹ ಪತ್ತೆಹಚ್ಚಲು ಸಹಕರಿಸಿದರು.

error: Content is protected !!

Join the Group

Join WhatsApp Group