ಉಡುಪಿ: ಮನೆಗೋಡೆ ಕುಸಿತ ➤ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 24. ನಿರಂತರವಾಗಿ ಸುರಿದ ಜಡಿ ಮಳೆಗೆ ಅಲೆವೂರು ಗ್ರಾಮದ ಪ್ರಗತಿ ನಗರದ ಸುಮಾ ರಮೇಶ್ ಆಚಾರ್ಯ ಎಂಬವರ ಮನೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದ ಘಟನೆ ಶುಕ್ರವಾರದಂದು ನಡೆದಿದೆ.

ಮನೆ ಮಾಲಕಿ ಮನೆಯಿಂದ ಹೊರ ಬಂದ ವೇಳೆ ಈ ಘಟನೆ ನಡೆದಿದ್ದರಿಂದ ಅವರು ಜೀವಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದು, ಸ್ಥಳಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಪಂಚಾಯತ್ ಸದಸ್ಯರಾದ ಜಲೇಶ್ ಶೆಟ್ಟಿ, ಮಾಜಿ ಸದಸ್ಯ ಸುಂದರ ನಾಯಕ್ ಕರ್ವಾಲ್ ಮತ್ತಿತರರು ಭೇಟಿ ನೀಡಿ ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group