ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 26. ರಾಜ್ಯ ಕಾಂಗ್ರೆಸ್ ಸರಕಾರವು ಬಡ ಕುಟುಂಬದ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದು, ಇದೀಗ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಬಿಟ್ಟು ಹತ್ತು ಕೆ.ಜಿ ಅಥವಾ ಕೇಂದ್ರದ್ದು ಸೇರಿ ಹತ್ತು ಕೆಜಿ ನೀಡುತ್ತಾರೋ ಎಂಬುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಬಡ ಕುಟುಂಬಗಳ ಪ್ರತಿಯೊಬ್ಬರಿಗೆ 5 ಕೆಜಿಯಷ್ಟು ಅಕ್ಕಿ ನೀಡುತ್ತಿದ್ದು, ಅದನ್ನು ಕಾಂಗ್ರೆಸ್ ಸರಕಾರ ಎಲ್ಲಿಯೂ ಹೇಳಿಕೊಳ್ಳುತ್ತಿಲ್ಲ. ಇಡೀ ಯೋಜನೆ ತನ್ನದೇ ಎಂಬಂತೆ ಬಿಂಬಿಸುತ್ತಿದೆ ಎಂದರು. ಇನ್ನು ಕೇಂದ್ರ ಸರಕಾರ ಅಕ್ಕಿ ನೀಡುತ್ತಿಲ್ಲ ಎಂದು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಯತ್ನಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಸಚಿವರು ಅರೋಪಿಸಿದ್ದಾರೆ.

Also Read  ವಯೋವೃದ್ಧೆಯ ಮೇಲೆ ಹಿಂಸಾತ್ಮಕ ವರ್ತನೆ ➤ ವೀಡಿಯೋ ವೈರಲ್ ಆರೋಪಿಗಳ ಬಂಧನ

 

 

error: Content is protected !!
Scroll to Top