ಅನ್ನಭಾಗ್ಯ ಅಕ್ಕಿಯ ಬದಲಾಗಿ ಜುಲೈ ತಿಂಗಳಿಂದಲೇ ಹಣ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.28. ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರವು ಅಕ್ಕಿ ವಿತರಣೆಯಲ್ಲಿ ತಾರತಮ್ಯ ಮಾಡಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರು ಪರ್ಯಾಯ ಹಾದಿ ಕಂಡುಕೊಂಡಿದ್ದಾರೆ.

ಇದೀಗ ಪ್ರತೀ 5 ಕೆಜಿ ಅಕ್ಕಿಯನ್ನು ವಿತರಿಸಿ, ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತೀ ಕೆಜಿಗೆ 34 ರೂಪಾಯಿಯಂತೆ ಮನೆಯ ಸದಸ್ಯರಿಗೆ ತಲಾ 5 ಕೆಜಿಯಂತೆ ಲೆಕ್ಕ ಹಾಕಿ ಹಣ ನೀಡಲಾಗುತ್ತದೆ. ಒಬ್ಬರಿಗೆ 5 ಕೆಜಿಯ ಅಕ್ಕಿ ಮೌಲ್ಯವನ್ನು ಹಣಕ್ಕೆ ಬದಲಿಸಿ 170 ರೂ. ಗಳನ್ನು ಕೊಟ್ಟ ಮಾತಿನಂತೆ ಜುಲೈನಿಂದಲೇ ಜಾರಿಗೊಳಿಸಲಾಗುವುದು. ಬಿಪಿಎಲ್ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದ್ದು, ಅಕ್ಕಿ ದಾಸ್ತಾನು ಆಗುವವರೆಗೆ ಹಣ ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.

Also Read  ಸುಪ್ರೀಂ ಕೋರ್ಟ್ ನ ನೂತನ ನ್ಯಾಯಮೂರ್ತಿಯಾಗಿ ಇಬ್ಬರು ಇಂದು ಪ್ರಮಾಣ ವಚನ ಸ್ವೀಕಾರ
error: Content is protected !!
Scroll to Top