ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 05. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ಬುಧವಾರದಂದು ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ತುಂಬೆ ಎಂಬಲ್ಲಿ ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೇ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದ್ದು, ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ
error: Content is protected !!
Scroll to Top