ಟೆರೇಸ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Death, deadbody, Waterfall

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜು. 06. ಮನೆಯ ಟೆರೇಸ್ ನಿಂದ ಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಜಡ್ಕಲ್ ಗ್ರಾಮದ ಹಾಲ್ಕಲ್ ಎಂಬಲ್ಲಿ ನಡೆದಿದೆ.

ಮೃತರನ್ನು ಶೇಖರ(32) ಎಂದು ಗುರುತಿಸಲಾಗಿದೆ. ಶೇಖರ್ ಅವರು ಜೂ. 30ರಂದು ಹಾಲ್ಕಲ್ ನಿವಾಸಿ ವಕ್ಕಚ್ಚನ್ ಎಂಬವರ ಮನೆಯ ಟೆರೇಸ್ ನಲ್ಲಿ ನೆಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಆಯ ತಪ್ಪಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಜು. 4ರಂದು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 6 ಜೊತೆ ಅವಳಿ-ಜವಳಿ ವಿದ್ಯಾರ್ಥಿಗಳು ► ವಿದ್ಯಾಸಂಸ್ಥೆಯ ಇತಿಹಾಸದಲ್ಲಿ ಪ್ರಥಮ
error: Content is protected !!
Scroll to Top