ಪುತ್ತಿಲ ಪರಿವಾರದಿಂದ ನಿಡ್ಪಳ್ಳಿ ಗ್ರಾ.ಪಂ. ಅಭ್ಯರ್ಥಿಯಾಗಿ ಜಗನ್ನಾಥ್ ರೈ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಜು. 10. ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ಅವರು ನಿಡ್ಪಳ್ಳಿ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕುಮಾರ್ ನರಸಿಂಹ ಭಟ್, ದೇವಸ್ಯ ಶ್ರೀನಿವಾಸ್ ಭಟ್, ಸುರೇಶ್, ಸತೀಶ್ ಕೆ ಹಾಗೂ ನಾರಾಯಣ ಪಾಟಾಳಿ ಮೊದಲಾದವರು ಉಪಸ್ಥಿತರಿದ್ದರು.

Scroll to Top