ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(83) ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಅಲ್ಲಿ ಖ್ಯಾತ ಹೃದಯತಜ್ಞ ಡಾ. ದೇವಿಶೆಟ್ಟಿ ಅವರು ಕಸ್ತೂರಿ ರಂಗನ್ ಅವರ ಆರೋಗ್ಯದ ಬಗ್ಗೆ ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಕಸ್ತೂರಿ ರಂಗನ್ ಅವರಿಗೆ ಭಾರತ ಸರ್ಕಾರದಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

Also Read   ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ ➤ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

error: Content is protected !!
Scroll to Top