ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 11. ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದು ಮೂವರು ಅಪರಿಚಿತರು ಪರಾರಿಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

ಪರ್ಕಳದಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದು, ಬಳಿಕ ರಿವರ್ಸ್‌ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಗೆ ಗಾಯವಾಗಿದೆ. ಇನ್ನು ಪರ್ಕಳದಿಂದ ಬರುವಾಗಲೇ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿ, ಮಣಿಪಾಲದಲ್ಲಿ ಯೂಟರ್ನ್ ಮಾಡಿ ಪರ್ಕಳ ಕಡೆಗೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಆದರೆ, ಪರ್ಕಳ ಸಮೀಪ ಕಾರು ನಿಲ್ಲಿಸಿದ ಮೂವರು ಅಪರಿಚಿತರು ಸಮೀಪದ ಕಾಡಿನೊಳಗೆ ನುಗ್ಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Also Read  ಮಾಣಿ: ಕಾರು - ದ್ವಿಚಕ್ರ ವಾಹನ ಢಿಕ್ಕಿ ➤ ರೊಚ್ಚಿಗೆದ್ದ ಜನರಿಂದ ಕಾರು ಜಖಂ ➤ ಎರಡು ಗುಂಪುಗಳ‌ ನಡುವೆ ಮಾರಾಮಾರಿ

error: Content is protected !!
Scroll to Top