ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ಕೋಮು ಗಲಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಜಿಲ್ಲಾ ಭದ್ರತಾ ಉಸ್ತುವಾರಿಯನ್ನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈಯವರಿಗೆ ವಹಿಸಲಾಗಿದೆ. ಬಂಟ್ವಾಳ ವೃತ್ತನಿರೀಕ್ಷಕರನ್ನಾಗಿ ಬೆಳಿಯಪ್ಪರವರನ್ನು ನೇಮಿಸಲಾಗಿದ್ದು, ಮಂಜಯ್ಯರನ್ನು ವರ್ಗಾಯಿಸಲಾಗಿದೆ.

error: Content is protected !!

Join the Group

Join WhatsApp Group