ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್

crime, arrest, suspected

(ನ್ಯೂಸ್ ಕಡಬ) newskadaba.com ಬೈಂದೂರುಜು. 14. ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಎಂದು ನಂಬಿಸಿ ಹಳದಿ ಬಣ್ಣದ ವಸ್ತುವನ್ನು ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೋಲಿಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತರನ್ನು ಶಿವಮೊಗ್ಗದ ನಿರಂಜನ್ ಎಸ್, ಮಿಲನ್ ಮೋನಿಶ್ ಶೆಟ್ಟಿ ಹಾಗೂ ಪೃಥ್ವಿ ಡಾಮ್ಮಿಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ ಗ್ರೀಸ್ ಎಂದು ಹೇಳಿ 10 ಲಕ್ಷ ರೂಪಾಯಿ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು..

ಅವರಿಂದ ಸುಮಾರು 3 ಕೆ.ಜಿ 910 ಗ್ರಾಂ ತೂಕದ ತಿಮಿಂಗಲದ ಅಂಬರ್ ಗ್ರೀಸ್ ನಂತಿರುವ ವಸ್ತುವನ್ನು ಸ್ವಾಧೀನಡಿಸಿಕೊಂಡು ಆರೋಪಿತರನ್ನು ವಶಕ್ಕೆ ಪಡೆದು ಇವರ ಮೇಲೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

Also Read  ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು

ಈ ರೀತಿ ಮೇಣದಂತಹ ವಸ್ತುವಿಗೆ ತಿಮಿಂಗಿಲದ ಅಂಬರ್ ಗ್ರೀಸ್ ಎಂದು ಸುಳ್ಳು ಹೇಳಿ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುವ ಜಾಲವು ಸಕ್ರಿಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರಿಂದ ಇರುವಂತೆಯೂ, ಈ ರೀತಿಯ ಯಾವುದೇ ಆಮಿಷಕ್ಕೆ ಒಳಗಾಗಬಾರದೆಂದು ಮತ್ತು ಈ ರೀತಿಯ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಹಾಕೆ ಅಕ್ಷಯ್ ಮಚೀಂದ್ರ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Also Read  ಮೀನು ಪ್ರಿಯರಿಗೆ ಸಂತಸದ ಸುದ್ದಿ ➤ ನಾಳೆ ಕಡಬದಲ್ಲಿ ವಿಶೇಷ ದರ ಕಡಿತ ಮೀನು ಮಾರಾಟ

error: Content is protected !!
Scroll to Top