ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 15. ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ ಘಟನೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿ ನಡೆದಿದೆ.

ಘಟನೆಯಿಂದ ಅದೃಷ್ಟವಶಾತ್ ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪಿದೆ. ಈ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ.

ಕದ್ರಿ ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ದಾರಿ ದೀಪದ ಲೈಟ್ ಕಂಬ ದೂರಕ್ಕೆ ಎಸೆಯಲ್ಪಟ್ಟಿದೆ. ಈ ಕುರಿತು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 

error: Content is protected !!
Scroll to Top