‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’- ವಿಪಕ್ಷಗಳ ಸಭೆ ಬಗ್ಗೆ ಮೋದಿ ವಾಗ್ದಾಳಿ 

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜು.18. ಕಟ್ಟರ್‌ ಭ್ರಷ್ಟಾಚಾರಿಗಳ ಸಮ್ಮೇಳ ನಡೆಯುತ್ತಿದೆ”ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಸಭೆ ಕುರಿತು ಟೀಕಾ ಪ್ರಹಾರ ನಡೆಸಿದ್ದಾರೆ.

ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದರು. ಬಳಿ ಮಾತನಾಡಿದ ಪ್ರಧಾನಿ ಮೋದಿ, ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿ ಪಕ್ಷಗಳು ಒಂದಾಗುತ್ತವೆ’ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

Scroll to Top