ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ತುಂಬೆ, ಜ.28. ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಭಾನುವಾರದಂದು ತುಂಬೆ ಸಮೀಪದ ಮಾರಿಪಳ್ಳದಲ್ಲಿ ನಡೆದಿದೆ.

ಮೃತ ಯುವಕರನ್ನು ಮಾರಿಪಳ್ಳ ನಿವಾಸಿಗಳಾದ ಸವಾದ್ ಮತ್ತು ರಮ್ಲಾನ್ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ತುಂಬೆಗೆ ಆಗಮಿಸಿ ಈಜಲು ನೇತ್ರಾವತಿ ನದಿಗಿಳಿದಿದ್ದರು. ಈ ಸಂದರ್ಭದಲ್ಲಿ ನೀರಿನ ಆಳ ತಿಳಿಯದೆ ಇವರಿಬ್ಬರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top