ನೀರಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಇಪ್ಪತ್ತು ತಿಂಗಳ ಹಸುಗೂಸೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿಂದ ವರದಿಯಾಗಿದೆ.

ಮೃತ ಮಗುವನ್ನು ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು ಕಿತಾಬುನ್ ದಂಪತಿಯ ಪುತ್ರಿ ಆಯಿಶಾ ಎಂದು ತಿಳಿದು ಬಂದಿದೆ. ಬುಧವಾರದಂದು ಸಂಜೆ ಅರ್ಧ ನೀರು ತುಂಬಿಸಿಟ್ಟಿದ್ದ ಬಕೆಟ್ ಬಳಿ ಆಟವಾಡುತ್ತಿದ್ದ ಮಗು ಬಕೆಟ್ ಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Also Read  ಆಲಂಕಾರು: 108 ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ‌ನೀಡಿದ ಗರ್ಭಿಣಿ

ಘಟನೆ ಸಂಬಂಧ ಕಾವೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top