ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.


ವಿವರ ಇಂತಿದೆ:

ಶನಿವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಂತರ ಬೆಳಿಗ್ಗೆ 11.15ಕ್ಕೆ ನಗರದ ಜೆಪ್ಪುವಿನ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ರಿ)ದ ಆಶ್ರಯದಲ್ಲಿ ಹಮ್ಮಿಕೊಂಡಿರುವ ಶೈಕ್ಷಣಿಕ ಸಮ್ಮೇಳನ ಪ್ರಶಸ್ತಿ ಪ್ರಧಾನ-ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ನಗರದ ಸರ್ಕ್ಯೂಟ್ ಹೌಸ್ ಗೆ ತೆರಳುವರು. ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮೂಲಭೂತ ಸೌಕರ್ಯ ವಂಚಿತ ರಾಜ್ಯದಲ್ಲೇ ನಂ.1 ಆದರ್ಶ ಗ್ರಾಮ ಬಳ್ಪ ➤ ರೋಗಿಯನ್ನು ಮರದ ಕುರ್ಚಿಯಲ್ಲಿ ಹೊತ್ತುಕೊಂಡೇ ಕಿ.ಮಿ. ದೂರ ಸಾಗಾಟ ➤ ಕಡತದ ಅಭಿವೃದ್ಧಿಗೆ ಸಾಕ್ಷಿಯಾಗಿ ಕತ್ತಲಲ್ಲೇ ಕಳೆಯುತ್ತಿರುವ ಹಲವು ಕುಟುಂಬ

error: Content is protected !!