ಗೃಹಲಕ್ಷ್ಮೀ ನೋಂದಣಿ ಪರಿಶೀಲಿಸಲು ಕರ್ನಾಟಕ ಒನ್ ಕೇಂದ್ರಕ್ಕೆ ಡಿಕೆಶಿ ದಿಢೀರ್ ಭೇಟಿ..!

(ನ್ಯೂಸ್ ಕಡಬ)newskadaba.com ರಾಮನಗರ, ಜು.22. ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದ್ದಾರೆ.

ಕನಕಪುರದ ಎಸ್ಎಲ್ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ಕೊಟ್ಟಾಗ ಅಲ್ಲಿನ ಸಿಬ್ಬಂದಿ, ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಡಿಸಿಎಂ ಅವರನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಇನ್ನು ಅಗತ್ಯ ದಾಖಲೆ ಸಲ್ಲಿಸಲು ತನಗಿರುವ ವೈಯಕ್ತಿಕ ತಾಂತ್ರಿಕ ತೊಡಕು ಬಗ್ಗೆ ಮಹಿಳೆಯೊಬ್ಬರು ನೀವೇದಿಸಿಕೊಂಡಾಗ ಅದಕ್ಕೆ ಪರಿಹಾರವನ್ನು ಡಿಕೆಶಿ ಅವರು ಸೂಚಿಸಿದ್ದಾರೆ.

error: Content is protected !!

Join the Group

Join WhatsApp Group