ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೇ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜುಲೈ 20ರಂದು ರಾತ್ರಿ ಕಾವೂರಿನ ಪೆಟ್ರೋಲ್ ಪಂಪ್‌ ವೊಂದರಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತನೋರ್ವ 4,100.60 ರೂ. ಬಿಲ್ ಪಾವತಿಸದೇ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.


ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರನ್ನು ಬೆನ್ನಟ್ಟಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ. ಈ ಕುರಿತು ನೀಡಿದ ದೂರಿ‌ನಂತೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ನಕಲಿ ಆಧಾರ್ ಕಾರ್ಡ್ ಬಳಕೆ: ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್

error: Content is protected !!
Scroll to Top