ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 24. ಭಾರೀ‌ ಮಳೆಯ ಹಿನ್ನೆಲೆ ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ರಜೆಯನ್ನು ಮುಂದಿನ 2 ಶನಿವಾರಗಳಂದು ತರಗತಿ ನಡೆಸಿ ಮರುಹೊಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ.

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ,
ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವರಹಳ್ಳಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಲ್ಕುಂದ, ಹರಿಹರ ಕ್ಲಸ್ಟರ್ ನ ಎಲ್ಲಾ ಶಾಲೆಗಳು ಹಾಗೂ ಬೆಥನಿ ಜ್ಞಾನೋದಯ ನೆಲ್ಯಾಡಿ ಶಾಲಾ ಆಡಳಿತ ಮಂಡಳಿ ತಮ್ಮ ಶಾಲೆಗೆ ರಜೆ ನೀಡಿದ್ದಾರೆ.

Also Read  ಅದ್ಯಪಾಡಿ: ಸುಮಾರು 1300 ಲೋಡ್ ಅಕ್ರಮ ಮರಳು ದಾಸ್ತಾನು ಪತ್ತೆ

ಕಡಬ ತಾಲ್ಲೂಕಿನಲ್ಲಿ ಇಂದು ಭಾರಿ ಮಳೆಯಾಗುತ್ತಿರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಶಾಲೆಗಳಿಗೆ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

error: Content is protected !!
Scroll to Top