‘ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌‌ಗಳಿಗೆ ಡಿಸಿ ಆದೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಕಡಬ, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

 

Scroll to Top