ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಜಿಲ್ಲಾ ನೋಂದಾಣಿಧಿಕಾರಿಯೋರ್ವರು ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಕಾಸರೋಡಿನಿಂದ ವರದಿಯಾಗಿದೆ.

ಮೃತರನ್ನು ಟಿ .ಇ ಮುಹಮ್ಮದ್ ಅಶ್ರಫ್ (55) ಎಂದು ಗುರುತಿಸಲಾಗಿದೆ. ಮೂಲತಃ ಮಲಪ್ಪುರಂ ನಿವಾಸಿಯಾಗಿರುವ ಇವರು ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಗರ ಹೊರವಲಯದ ಹೋಟೆಲ್ ವೊಂದರಲ್ಲಿ ರೂಂ ಪಡೆದು ವಾಸ್ತವ್ಯ ಹೂಡಿದ್ದರು.

 

ಬೆಳಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬರದೇ ಇದ್ದುದರಿಂದ ಸಂಶಯಗೊಂಡು ಅವರ ಮೊಬೈಲ್ ಗೆ ಕರೆಮಾಡಿದಾಗ ತೆಗೆಯದೆ ಇದ್ದು, ಬಾಗಿಲು ತೆರೆದು ನೋಡಿದಾಗ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ತಲಪಿಸಿ ತಪಾಸಣೆ ನಡೆಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಜುಲೈ 19 ರಂದು ಇವರು ಈ ಹೋಟೆಲ್ ನಲ್ಲಿ ರೂಂ ಪಡೆದಿದ್ದರು.

Also Read  ಮದುವೆಗೆ ಒಪ್ಪದ ಮಗಳನ್ನೇ 1ಲಕ್ಷ ರೂ.ಗೆ ಮಾರಿದ ಪೋಷಕರು..!

 

error: Content is protected !!
Scroll to Top