ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮೈಸೂರು, ಜು.26. ಗೃಹಲಕ್ಷ್ಮಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲಿಕನೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.


ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ನಕುಲ್ ನೆಟ್ ವರ್ಕ್ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಎನ್ನಲಾಗಿದೆ.


ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸಿ ಜನರನ್ನು ಯಾಮಾರಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಸುಕೇಶ್ ಕುಮಾರ್ ದೂರು ನೀಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

 

error: Content is protected !!

Join the Group

Join WhatsApp Group