ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು.

ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮಂಡ್ಯ ಎಸ್ಪಿಯಾಗಿದ್ದ ಭೂಷಣ್ ಜಿ. ಬೊರಸೆಯವರು ಸುಧೀರ್ ಕುಮಾರ್ ರೆಡ್ಡಿಯವರಿಗೆ ಮಂಡ್ಯ ಎಸ್ಪಿಯಾಗಿ ಅಧಿಕಾರ ಹಸ್ತಾಂತರಿಸಿ ದಕ್ಷಿಣ ಕನ್ನಡಕ್ಕೆ 2016ನೇ ಮೇ 21ರಂದು ವರ್ಗಾವಣೆಗೊಂಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಆಗಮಿಸಿರುವ ಸುಧೀರ್ ಕುಮಾರ್ ರವರಿಗೆ ಭೂಷಣ್ ರವರು ಅಧಿಕಾರ ಹಸ್ತಾಂತರಿಸಿದ್ದಾರೆ.

error: Content is protected !!
Scroll to Top