ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ಕುಕ್ಕುಂಜೆಯಿಂದ ಅಳಂಬ, ಬರೆಂಬಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಕುಸಿದಿದೆ ಎನ್ನಲಾಗಿದೆ.

ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕ ಸಂಚಾರ ಮಾಡುತ್ತಿದ್ದರು ಎನ್ನಲಾಗಿದೆ.

Also Read  ಪದವು: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರರಿಬ್ಬರು ಗಂಭೀರ

 

error: Content is protected !!
Scroll to Top