ವಂದೇ ಭಾರತ್​ ರೈಲಿ​ಗೆ ಕಲ್ಲೆಸೆದ ಕಿಡಿಗೇಡಿಗಳು – ಕಿಟಕಿ ಗಾಜುಗಳಿಗೆ ಹಾನಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು.27. ಆಗ್ರಾ ರೈಲ್ವೇ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿ​ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ರೈಲು ಕೋಚ್‌ನ ಗಾಜುಗಳು ಒಡೆದಿದ್ದು, ರೈಲ್ವೇ ಮೂಲಗಳು ನೀಡಿದ ಮಾಹಿತಿ ಪ್ರಕಾರ, ಆಗ್ರಾದ ಮಾನಿಯಾ ಮತ್ತು ಜಜೌ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದಾಗ ಕಲ್ಲು ತೂರಲಾಗಿದೆ. ಸಿ-7 ಕೋಚ್‌ನ ಸೀಟ್ ಸಂಖ್ಯೆ 13-14ರ ಕಿಟಕಿ ಗಾಜುಗಳು ಒಡೆದಿವೆ. ರೈಲ್ವೇ ಸಿಬ್ಬಂದಿಯ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಘಟನೆಯ ತನಿಖೆ ನಡೆಯುತ್ತಿದೆ ಎಂದು ಆಗ್ರಾ ರೈಲ್ವೆ ವಿಭಾಗದ ಪಿಆರ್‌ಒ ಶ್ರೀವಾಸ್ತವ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.

ಈ ರೀತಿ ಕಲ್ಲು ತೂರಾಟ ನಡೆಯುತ್ತಿರುವುದು ಇದೇ ಮೊದಲಲ್ಲ. ಭೋಪಾಲ್‌ ನಿಂದ ನಿಜಾಮುದ್ದೀನ್ ನಿಲ್ದಾಣದ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೂ ಕೂಡ ಕಲ್ಲು ತೂರಿದ ಘಟನೆ ನಡೆದಿತ್ತು.

 

error: Content is protected !!

Join the Group

Join WhatsApp Group