ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನ ಮಿಸ್ ಮಾಡಿಕೊಂಡ ರಾಜ್ಯಪಾಲ ಗೆಹ್ಲೋಟೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟೆ ಅವರನ್ನೇ ಬಿಟ್ಟು ವಿಮಾನ ಹಾರಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.


ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳಬೇಕಿದ್ದ ರಾಜ್ಯಪಾಲರು, ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್ ಗೆ ತೆರಳಲು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಇನ್ನೂ ಏರ್ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾಲರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್ ನಲ್ಲಿ ಕೂರಿಸಿದ್ದು, ಟೈಮ್ ಆಗಿರುವುದು ಅವರ ಗಮನಕ್ಕೆ ಬಂದಿರುವುದಿಲ್ಲ. ಇದರಿಂದ ವಿಮಾನ ಸರಿಯಾದ ಸಮಯಕ್ಕೆ ಟೇಕಫ್ ಆಗಿ ಹೋಗಿದೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group