ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ಹೊರಟ ಮುಸ್ಲಿಂ ದಂಪತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.28. ರಕ್ತದಾನದ ಮಹತ್ವ, ಜನ ಜಾಗೃತಿಗಾಗಿ ದಂಪತಿ ಮಂಗಳೂರಿನಿಂದ ಇದೇ ಮೊದಲ ಬಾರಿಗೆ ಬೈಕ್‌ ಪ್ರಯಾಣದ ಮೂಲಕ ಕಾರ್ಗಿಲ್‌ ಗೆ ತೆರಳಲಿದ್ದು, ಮಂಗಳೂರಿನ ಸೈಫ್ ಸುಲ್ತಾನ್ ಮತ್ತು ಪತ್ನಿ ಅದೀಲಾ ಫರ್ಹಾನ್‌ ಜೊತೆಯಾಗಿ ಬೈಕ್‌ ಮೂಲಕ ತಮ್ಮ ಯಾತ್ರೆಯನ್ನು ಜು. 29ರಂದು ಮಂಗಳೂರಿನಿಂದ ಶುರು ಮಾಡಿ ಆ. 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಗಿಲ್‌ ನಲ್ಲಿ ಸಮಾಪನ ಮಾಡಲಿದ್ದಾರೆ.


ಈ ವೇಳೆ ಅವರು ದೇಶದಾದ್ಯಂತ ರಕ್ತದಾನ, ದೇಶಭಕ್ತಿ, ದೇಶಪ್ರೇಮ, ಹಿಜಾಬ್‌ ಕುರಿತ ಮಹತ್ವ ಸೇರಿದಂತೆ ಈ ಎಲ್ಲಾ ವಿಚಾರದ ಕುರಿತು ಜಾಗೃತಿ ಮೂಡಿಸಲಿದ್ದಾರೆ. ಮಂಗಳೂರಿನ ನೆಹರೂ ಮೈದಾನದಲ್ಲಿ ಜು. 29ರಂದು ಬೆಳಿಗ್ಗೆ 7.30ಕ್ಕೆ ಸ್ಪೀಕರ್‌ ಯುಟಿ ಖಾದರ್‌ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್‌ ಜೈನ್‌ ಅವರು ಭಾರತ ದ್ವಜವನ್ನು ನೀಡುವ ಮೂಲಕ ಇವರ ಯಾತ್ರೆ ಆರಂಭಗೊಳ್ಳಲಿದೆ.

Also Read  ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು


ಇದರ ಪೂರ್ವಭಾವಿಯಾಗಿ ಉಚಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಬ್ಲಡ್‌ ಹೆಲ್ಪ್ ಲೈನ್‌ ಕರ್ನಾಟಕ, ರೆಡ್ ಕ್ರಾಸ್‌ ಬ್ಲಡ್‌ ಬ್ಯಾಂಡ್ ಈ ಕಾರ್ಯಕ್ರಮಕ್ಕೆ ಸಹಭಾಗಿತ್ವ ನೀಡಲಿದೆ. ಇದೇ ಮೊದಲ ಬಾರಿಗೆ ನಾನು ಪತ್ನಿ ಜೊತೆ ಕರ್ನಾಟಕದಿಂದ ಕಾರ್ಗಿಲ್‌ಗೆ ಜಾಗೃತಿಗಾಗಿ ಬೈಕ್‌ ನಲ್ಲಿ ಹೊರಟಿದ್ದೇವೆ. ಇಲ್ಲಿಂದ ಭಾರತದ ಧ್ವಜ ಪಡೆದು ಅದನ್ನು ಕಾರ್ಗಿಲ್‌ನಲ್ಲಿ ಕರ್ನಲ್ ಅಭಿಮನ್ಯುವಿಗೆ ಮುಟ್ಟಿಸಲಿದ್ದೇವೆ. ಅವರು ಆ. 15ರಂದು ಸ್ವಾತಂತ್ರ್ತ ದಿನಾಚರಣೆ ದಿನ ಧ್ವಜಾರೋಹಣ ಮಾಡಲಿದ್ದಾರೆ.

error: Content is protected !!
Scroll to Top